ವಿಷಯಕ್ಕೆ ಹೋಗಿ

ಏಕಾಂತ

ಜೀವನದ ಚಿಂತೆಗಳ ಸಂತೆಯ 
ಸುಳಿಯಿಂದ ಹೊರಳಿ ಹೊರಬಂದು
ಪಡೆಯಬೇಕೊಂದು ಏಕಾಂತ 

ಮುಂದೆ ಹೊಗಳಿ ಹಿಂದೆ ತೆಗಳಿ
ಹಲ್ಲುಗಿಂಜುವ ಕಪಟ ವೇದಿಕೆಯಿಂದ
ದೂರಹೋಗಿ ಪಡೆಯಬಹುದೇ ಏಕಾಂತ

ಎಲ್ಲರ ಮಧ್ಯದಲ್ಲಿರುವ ಬಡ ಒಂಟಿತನಕ್ಕಿಂತ
 ಶ್ರೀಮಂತ ನನ್ನ ಏಕಾಂತ
ನಾನರಿಯದ ನನ್ನ ತಪ್ಪು ಒಪ್ಪುಗಳ
 ಗ್ರಹಿಸಿ ತಿದ್ದುವದು ಏಕಾಂತ

ಬೇಸರಿಸಿಕೊಳ್ಳದೆ ನನ್ನ ಕ್ಷುಲ್ಲಕ ಕಥೆಗಳನ್ನು
 ಆಹ್ಲಾದಿಸುವ ಏಕಾಂತ
ಯಾರರಿಯದ ನೋವುಗಳ ಕಣ್ಣೀರಿನ ಮೂಟೆ
 ಹೊತ್ತು ನನ್ನೊಡನೆ ನೊಂದಿಹ ಏಕಾಂತ

ಬೆತ್ತಲಾಗದೆ ಕತ್ತಲೆಯಲ್ಲೂ 
ಬೆಳಕು ಬಿತ್ತರಿಸುವ ಏಕಾಂತ
ಚಿತ್ತದೊಲುಮೆಗೆ ಭಾವನೆಗಳ
 ಬೈತಿರಿಸಿ ಸುರಿಯುವ ಏಕಾಂತ

ಅನಿರ್ವಚನ ಆಲಾಪಗಳಿಗೂ 
ಅವಕಾಶ ನೀಡುವ ಏಕಾಂತ
ಅಗಮ್ಯದಾದಿಗೆ ಅನುಸರಿಸುವ
 ಪ್ರಥಮೇಯ ಮಾರ್ಗ ಏಕಾಂತ

ಆತ್ಮನ್ಯೂನ್ಯತೆ ಆತ್ಮಪ್ರಶಂಸೆಗಳ ನಡುವಿನಲ್ಲಿ 
ಆತ್ಮವಿಮರ್ಶೆಗೆ ಅನುವಾದ ಏಕಾಂತ
ಅರಿಯದೆ ಮುಗ್ದತೆಯಲ್ಲಿ ಜಾರಿಸಿ
ನನ್ನನ್ನು ನನಗೆ ಭೇಟಿಮಾಡಿಸುವ ಏಕಾಂತ..


      -----------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ನೀ ನನ್ನ ಒಲವು..❤ ಸಂಚಿಕೆ-20

ಮನೆಗೆ ಮರಳಿದ ಪರಿಧಿ ಮುಂದೆ ಏನು ಮಾಡಬೇಕೆಂದು ತಿಳಿಯದೆ ಕ್ಷಣಕಾಲ ಕಣ್ಣು ಮುಚ್ಚಿ ಸೋಫಾ ಮೇಲೆ ಒರಗಿ ಬಿಟ್ಟಿದ್ದಳು. ಹುಡುಕಾಟದ ಆರಂಭ ಎಲ್ಲಿಂದ? ಹೇಗೆ? ಮನೆಯಲ್ಲಿ ಏನೆಂದು ಹೇಳಿ ಹೊರಡುವುದು? ಸಹಾಯ ನಿರೀಕ್ಷೆ ಇದ್ದದ್ದು ಪ್ರಸನ್ನನಿಂದ ಮಾತ್ರ,, ಈಗ ಅವರು ತನಗೆ ಬೆಂಬಲಕ್ಕೆ ನಿಲ್ಲದೆ ವ್ಯತಿರಿಕ್ತವಾಗೇ ವರ್ತಿಸಿದರು. ಮುಂದೆ ಏನು ಮಾಡಬೇಕೆಂದು ತಿಳಿಯದೆ ನಿತ್ರಾಣಳಾಗಿ ಕುಳಿತು  ಬಿಟ್ಟಿದ್ದಳು. "ಯಾಕೆ?? ಸುಮ್ಮನೆ ಕುಳಿತೇ..!  ಇಷ್ಟು ಬೇಗ ಸೋತು ಹೋದೆಯಾ.."  ಹರ್ಷ ಕಣ್ಣಿಗೆ ಬಟ್ಟೆ ಕಟ್ಟಿ ಅಲ್ಲಿಯೇ ಸುತ್ತ ಮುತ್ತ ನಿಂತು ಚಪ್ಪಾಳೆ ತಟ್ಟಿ ನನ್ನ ಹುಡುಕು ನೋಡೋಣ ಎಂದು ಅಣಗಿಸಿದಂತಾಯಿತು ಪರಿಧಿಗೆ. ತಕ್ಷಣ ಕಣ್ಣು ತೆರೆದು ಬೆಚ್ಚಿದ್ದಳು ಹರ್ಷ... ಅವಳ ಸೋತ ಮನಸ್ಸಿಗೆ ಅವನ ನೆನಪೇ ಚೈತನ್ಯ ತುಂಬಿತ್ತು. ಅರಿಯದ ಮುಂದಿನ ಕತ್ತಲೆಯ ದಾರಿಯಲ್ಲಿ ಅವನ ಇರುವಿಕೆಯೇ ಬೆಳಕಿನ ದೀವಿಗೆಯಾಗಿತ್ತು. ಆ ಕೂಡಲೇ ಆಕೆ ಪಾದರಸದಂತೆ ಮುಂದಿನ ಯೋಜನೆಗಳನ್ನು ರೂಪಿಸಿದಳು. ಹಳೆಯ ಸ್ನೇಹಿತೆಯರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾನ್ಚಿಯ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಪ್ರಯತ್ನಿಸಿದಳು. ಆದರೆ ಅವಳ ಎಣಿಕೆ ಪ್ರಕಾರ ಮಾನ್ವಿ ಬಗ್ಗೆ ಸದ್ಯದ ಮಾಹಿತಿಗಳೇನೂ ಲಭೀಸಲಿಲ್ಲ‌. ಇನ್ನೂ ಮುಂಬೈನ ಎಂ.ಆರ್ ಹಾಸ್ಪಿಟಲ್‌ನಿಂದಲೇ ಮುಂದಿನ ಕೆಲಸ ಸಾಧ್ಯವೆಂದು ಅರಿತ ಮೇಲೆ ಅತ್ತೆ ಸುಲೋಚನರ ಬಳಿ ಕೂತು ಮಾತಾಡಿ ತಾನು ಕೆಲವು ದಿನಗಳ ಮಟ್ಟಿಗೆ ತನ್ನ

ನೀ ನನ್ನ ಒಲವು..❤ ಸಂಚಿಕೆ- 54

ಅಂದು ಆಸ್ಪತ್ರೆಯಲ್ಲಿ ಮಾನ್ವಿಯ ಮೊದಲ ದಿನ. ಅದೂ ಡಾ.ಪ್ರಸನ್ನನ ಅರ್ಧಾಂಗಿಯಾಗಿ.  ಪ್ರಸನ್ನನ ಕರ್ಕಶ ಸದ್ದಿನ ಬೈಕ್ ಮೇಲೆ ಇಬ್ಬರೂ ಆಸ್ಪತ್ರೆಗೆ ಬಂದು ಇಳಿಯುತ್ತಿದ್ದಂತೆ "Congratulations sir.." ಶಿಷ್ಯರ ಒಕ್ಕೊರಲಿನ ಕೂಗು ಕೇಳಿ ಬಂದಿತು. ಎದುರಿಗೆ ಒಂದೇ ಒಂದು ಕೆಂಗುಲಾಬಿಗೆ ಮೂರು ಕೈಗಳು ಬಡಿದಾಡುತ್ತಿದ್ದವು.  ಹೂಗುಚ್ಚ ಮರೆತಿದ್ದರೇನೋ ಪಾಪ ಸಿಕ್ಕ ಒಂದು ಗುಲಾಬಿಯ ಬೇಡಿಕೆ ಜಾಸ್ತಿಯಾಗಿತ್ತು‌. ಜಿಪುಣ ಗುರುವಿನ ಹಾದಿಯಲ್ಲಿ ನಡೆಯುವ ಶಿಷ್ಯರ ಬಗ್ಗೆ ಹೆಚ್ಚೇನೂ ಹೇಳಬೇಕಿಲ್ಲ. ಇನ್ನೊಬ್ಬ ಪರಮ ಆದ್ಯ ಶಿಷ್ಯೋತ್ತಮ ಎಲ್ಲೂ ಕಾಣಲಿಲ್ಲ. ಅತ್ತಿತ್ತ ನೋಡಿದ ಪ್ರಸನ್ನ.  " ಎಲ್ಲಿ ? ವಿಜ್ಞಾನಿಗಳು ಕಾಣಿಸ್ತಿಲ್ಲವಲ್ಲ?" ಹೂ ತೆಗೆದುಕೊಳ್ಳುತ್ತಾ ಕೇಳಿದ. "ಅವನಿಗೆ ಬೆಳಿಗ್ಗೆ ಬೆಳಿಗ್ಗೆ ಡಾ.ಕುಮಾರ್ ಕಡೆಯಿಂದ ಮಂಗಳಾರತಿ ನಡಿತಿದೆ ಪಾಪ" ನಕ್ಕು ನುಡಿದ ಧೃವ. " ಯಾಕೆ? ಅವರ ಮೇಲೆ ಏನಾದ್ರೂ ಎಕ್ಸ್ಪೆರಿಮೆಂಟ್ ಮಾಡಿದ್ನಾ?"  "ಎಕ್ಸ್ಪೆರಿಮೆಂಟ್ ಗುಂಗಿನಲ್ಲಿ ರಿಪೋರ್ಟ್ ಅದಲು ಬದಲು ಮಾಡಿದ್ದಾನಂತೆ. ಅದೂ ಯಾರದೋ ಡೆತ್ ರಿಪೋರ್ಟ್‌ನ್ನು ಆಗತಾನೇ ಚೆಕ್‌ಪ್‌ಗೆ ಹೋಗಿರುವ ವ್ಯಕ್ತಿ ಕಡೆಯವರ ಕೈಯಲ್ಲಿ ಇಟ್ಟವ್ನೆ‌. ಆ ಪುಣ್ಯಾತ್ಮರು ಒಂದು ಕ್ಷಣ ಷಾಕ್ ಆಗಿ ಇವನಿಗೆ ಬಾಯಿಗೆ ಬಂದಹಾಗೆ ಉಗಿದು ಡಾ.ಕುಮಾರ್ ಹತ್ತಿರ ದೂರು ಕೊಟ್ಟಿದ್ದಾರೆ. " " irresponsible fellow

ನೀ ನನ್ನ ಒಲವು..❤ ಸಂಚಿಕೆ-52

ಪ್ಯಾರಡೈಸ್ ಗ್ಲಾಸ್ ಹೌಸ್ ಹಿಂದೊಮ್ಮೆ ಹರ್ಷನನ್ನ ಭೇಟಿಯಾಗುವ ಕನಸು ಹೊತ್ತು ಕಾಲಿಟ್ಟ ಅದೇ ಮದುವೆ ಮಂಟಪ. ಸ್ವರ್ಗವೇ ಧರೆಗಿಳಿದಂತೆ ಜಗಮಗ ಬೆಳಕು,  ಹೂವಿನ ರಾಶಿ ರಾಶಿ ಅಲಂಕಾರದಲ್ಲಿ ಕಂಗೊಳಿಸುತ್ತಿತ್ತು. ಪ್ರವೇಶ ದ್ವಾರದಿಂದ ಹಿಡಿದು ಎಲ್ಲೆಡೆಯೂ  ಅಥ್ರೇಯನ ಸೆಕ್ಯೂರಿಟಿಗಳ ಗುಂಪು ಪಹರೆ ಕಾಯುತ್ತಿದ್ದರು. ರೆಡ್ ಯುನಿಫಾರ್ಮ್ ಧರಿಸಿದ ಮ್ಯಾರೇಜ್ ಮ್ಯಾನೇಜ್ಮೆಂಟ್ ಟೀಮಿನವರು ತಮ್ಮ ಕಾರ್ಯಗಳಲ್ಲಿ ನಿರತರಾಗಿ ಲವಲವಿಕೆಯಿಂದ ಓಡಾಡುತ್ತಿದ್ದರು. ಬಂಧುಗಳು ಹಾಗೂ ಆಮಂತ್ರಿತ ಗಣ್ಯರ ಹೊರತು ಒಂದು ನೊಣ ಕೂಡ ಒಳಗೆ ಬರಲು ಅವಕಾಶವಿರದಂತೆ ಬಿಗಿ ಭದ್ರತೆಯನ್ನು ವಹಿಸಲಾಗಿತ್ತು.  ಆಗರ್ಭ ಶ್ರೀಮಂತ ರಘುನಂದನ್ ಏಕಮೇವ ಸುಪುತ್ರಿಯ ಮದುವೆಗೆ ಆಯ್ದ ಗಣ್ಯಾತಿಗಣ್ಯರ ಆಗಮನವೂ ಆಗಿತ್ತು. ಸೋದರ ಸಂಬಂಧಿಗಳು ಸ್ನೇಹಿತರ ಒಡನಾಟ ಓಡಾಟ ಸಂಭ್ರಮದ ಮೆರುಗು ಹೆಚ್ಚಿಸಿತ್ತು.  ಪರಿ ಎಲ್ಲೆಡೆಗೂ ದೃಷ್ಟಿ ಹಾಯಿಸಿದಳು. ಆಡಂಬರದ ಮದುವೆ ಮಂಟಪ ಬಿಕೋ ಎನ್ನಿಸಿತ್ತು. ಅವಕಾಶಗಳು ವಿಫಲವಾದರೆ, ಮಾಡಿದ ಉಪಾಯಗಳು ಕೈ ತಪ್ಪಿದರೆ, ವಿಧಿಯ ನಿರ್ಧಾರ ಬೇರೆಯೇ ಆಗಿದ್ದರೆ ಇದೇ ಮಂಟಪದಲ್ಲಿ ಹರ್ಷ ಮಾನ್ವಿಯ ಮದುವೆ ನಿಶ್ಚಿತ. ಒಂದು ವೇಳೆ ಎಲ್ಲಾ ಅಂದುಕೊಂಡಂತೆ ನಡೆದರೆ ಹರ್ಷ ತನ್ನವನಾಗಬಹುದು. ಆದರೆ ಮಾನ್ವಿಯ ಜೀವನ?? ಅವಳ ಚಿಂತೆಯನ್ನು ಗ್ರಹಿಸಿದ ಸಂಜೀವಿನಿ ಪರಿಯ ಕೈ ಅಮುಕಿದಳು. ಎಲ್ಲ ಒಳ್ಳೆಯದೇ ಆಗುತ್ತೆ. ಭರವಸೆಯ ಸ್ಪರ್ಶವದು. ಕಣ್ಣಲ್ಲೇ ಮುಗುಳ್ನಕ್ಕಳು ಪರಿ.